ಶಿಷ್ಯವೇತನ ಮಂಜೂರಿಗೆ ಆನ್‍ಲೈನ್ ಅರ್ಜಿ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಸರಕಾರಿ, ಅನುದಾನಿತ, ಅನುದಾನರಹಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಶಿಷ್ಯವೇತನ ಮಂಜೂರಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ http://ssp.postmatric.karnataka.gov.in/2021 ವನ್ನು ಅಭಿವೃದ್ದಿಪಡಿಸಲಾಗಿದೆ. ಹೊಸದಾಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳು ನೂತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಆಧಾರ ಕಾರ್ಡನೊಂದಿಗೆ ಪಾಲಕರ ಆಧಾರ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ಅಂಕಪಟ್ಟಿ, ಫೀ ರಸೀದಿ ಸೇರಿ ದಾಖಲಾತಿಗಳೊಂದಿಗೆ ಮಾರ್ಚ 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-35254757 ಮತ್ತು ದೂಸಂ.08354-221821ಗೆ ಸಂಪರ್ಕಿಸಬಹುದಾಗಿದೆ.

Be the first to comment

Leave a Reply

Your email address will not be published.


*