ಬಿಜೆಪಿ ಹಿರಿಯ ಮುಖಂಡ ಮಲ್ಲಣ್ಣ ಶಾರದಳ್ಳಿ ನಿಧನ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ರಾಜ್ಯ ಸುದ್ದಿಗಳು 

ನಾರಾಯಣಪುರ:

 

CHETAN KENDULI

 

ಯಾದಗಿರಿ ಜಿಲ್ಲಾ ಬಿಜೆಪಿ ಹಿರಿಯ ಮುಖಂಡ, ನಾರಾಯಣಪುರ ನಿವಾಸಿ ಮಲ್ಲಣ್ಣ ನಿಂಗಣ್ಣ ಶಾರದಳ್ಳಿ (78) ಗುರುವಾರ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಪುತ್ರರಾದ ನಾರಾಯಣಪುರದ ಉದಯವಾಣಿ ವರದಿಗಾರ ಬಸವರಾಜ ಶಾರದಳ್ಳಿ, ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ವಕ್ತಾರ ಶಿವುಕುಮಾರ ಶಾರದಳ್ಳಿ, ಬೆಂಗಳೂರು ಬೆಸ್ಕಾಂ ನೌಕರ ಮಹೇಶ ಶಾರದಳ್ಳಿ ಹಾಗೂ ಇಬ್ಬರು ಹೆಣ್ಣು ಮಕ್ಕಳು, ಅಪಾರ ಬಂಧು ಬಳಗ ಇದೆ. ಮೃತರ ಅಂತ್ಯಕ್ರಿಯೆ ಫೆ.26ರಂದು ಮದ್ಯಾಹ್ನ 12ಕ್ಕೆ ನಾರಾಯಣಪುರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಸಂತಾಪ:
ಮುದ್ದೇಬಿಹಾಳ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಸುರಪುರ ಶಾಸಕ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜೂಗೌಡ ನಾಯಕ, ಮಾಜಿ ಸಚಿವ ಸಿ.ಎಸ್.ನಾಡಗೌಡ, ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಸ್ವಾಮೀಜಿ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ, ಸೇರಿದಂತೆ ಹಲವು ಗಣ್ಯರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

 

Be the first to comment

Leave a Reply

Your email address will not be published.


*