ಬೆಂಗಳೂರು: ಕರ್ನಾಟಕ ರಾಜ್ಯದ 31ನೇ ಮುಖ್ಯಮಂತ್ರಿಗಳಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ ಎಂ ಕೃಷ್ಣ, ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಸದಾನಂದಗೌಡ, ನವೀನ್ ಕುಮಾರ್ ಕಟೀಲ್, ತೇಜಸ್ವಿ ಸೂರ್ಯ, ಮುರುಳೀಧರ್ ರಾವ್, ಉಮೇಶ ಕತ್ತಿ, ಮುರುಗೇಶ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ಕೆ.ಎಸ್.ಈಶ್ವರಪ್ಪ, ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಉಪಸ್ಥಿತರಿದ್ದರು. ಆದರೆ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ ಮಾತ್ರ ಈ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು ಕಂಡು ಬಂತು. ಆರ್.ಅಶೋಕ ಎಲ್ಲಿದ್ದಾರೆ ? ಎಂದರೆ ಅತೃಪ್ತ ಶಾಸಕರ ಜೊತೆ ಮುಂಬೈಯಲ್ಲಿ ಆರ್.ಅಶೋಕ ಇದ್ದಿದ್ದರಿಂದ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.
Be the first to comment