ಬಿ.ಎಸ್​ ಯಡಿಯೂರಪ್ಪ ಪ್ರಮಾಣವಚನ ಕಾರ್ಯಕ್ರಮಕ್ಕೆ ಆರ್.ಅಶೋಕ್​ ಗೈರಾಗಿದ್ದು ಏಕೆ ?


           ರಾಜಕೀಯ ಸುದ್ದಿ


ಬೆಂಗಳೂರು: ಕರ್ನಾಟಕ ರಾಜ್ಯದ 31ನೇ ಮುಖ್ಯಮಂತ್ರಿಗಳಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್​ ಎಂ ಕೃಷ್ಣ, ಜಗದೀಶ್ ಶೆಟ್ಟರ್‌, ಅರವಿಂದ ಲಿಂಬಾವಳಿ, ಸದಾನಂದಗೌಡ, ನವೀನ್​ ಕುಮಾರ್​ ಕಟೀಲ್​, ತೇಜಸ್ವಿ ಸೂರ್ಯ, ಮುರುಳೀಧರ್​ ರಾವ್​, ಉಮೇಶ ಕತ್ತಿ, ಮುರುಗೇಶ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ಕೆ.ಎಸ್.ಈಶ್ವರಪ್ಪ, ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಉಪಸ್ಥಿತರಿದ್ದರು. ಆದರೆ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ ಮಾತ್ರ ಈ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು ಕಂಡು ಬಂತು.  ಆರ್.ಅಶೋಕ ಎಲ್ಲಿದ್ದಾರೆ ? ಎಂದರೆ ಅತೃಪ್ತ ಶಾಸಕರ ಜೊತೆ ಮುಂಬೈಯಲ್ಲಿ ಆರ್.ಅಶೋಕ ಇದ್ದಿದ್ದರಿಂದ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.

Be the first to comment

Leave a Reply

Your email address will not be published.


*