ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ

ಅಂಬಿಗ್ ನ್ಯೂಸ್

ರಾಜ್ಯ ಸುದ್ದಿಗಳು

ಮೈಸೂರು:

CHETAN KENDULI

ಅಗತ್ಯ ವಸ್ತುಗಳ ಕೊಂಡುಕೊಳ್ಳಲು ಎಂ ಜಿ ರಸ್ತೆಯ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಸಾರ್ವಜನಿಕರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ವಿದ್ಯಾಶಂಕರ್ ಅವರು ಮಾಸ್ಕ್ ಮತ್ತು ಸ್ಯಾನಿಟೈಸರ್‌ ವಿತರಣೆ ಮಾಡುವ ಮೂಲಕ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದರು .

ಕೆಎಸ್ ಒಯು ಕುಲಪತಿ ಡಾ.ವಿದ್ಯಾಶಂಕರ್ .ಎಸ್ ಅವರು ಕೊರೋನಾ ಜಾಗೃತಿ ಅಭಿಯಾನ ಮತ್ತು ಅರಿವು ಮೂಡಿಸುವ ಸಲುವಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಹಿಂಭಾಗದಲ್ಲಿರುವ ತರಕಾರಿ ಮಂಡಿಯಲ್ಲಿ ಸಾರ್ವಜನಿಕರಿಗೆ ಮಾಸ್ಕ್ & ಸ್ಯಾನಿಟೈಸರ್‌ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . 



ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಜನರಿಗೆ ಕೊರೋನಾ ಕುರಿತಂತೆ ಜಾಗೃತಿ ಮೂಡಿಸಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ ವಿತರಿಸಲಾಯಿತು..ಈ ವೇಳೆ ಅಲ್ಲಿಯೇ ಇದ್ದ ಮಂಗಳಮುಖಿಯರಿಗೂ ಕೂಡ ಕುಲಪತಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿದರು.

 

 

Be the first to comment

Leave a Reply

Your email address will not be published.


*