ಕೋಲಿ ಸಮಾಜಕ್ಕೆ ಎಸ ಟಿ ಕೋಡಿಸುವ ಜವಾಬ್ದಾರಿ ಮುಖ್ಯಮಂತ್ರಿ ಬಿ.ಎಸ ವಾಯ್ ಹೊರಬೇಕು ಎಂದು ಆಗ್ರಹಿಸಿದ ತಿಪಣ್ಣಪ್ಪ ಕಮಕನೂರ


          ರಾಜ್ಯ ಸುದ್ದಿಗಳು


ಹಿಂದುಳಿದ  ಕೋಲಿ  ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯರನ್ನು ಸೋಮವಾರ ವಿಧಾನಪರಿಷತ್ತಿನಲ್ಲಿ ಆಗ್ರಹಿಸಿದರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಮಂಡಿಸಿದ

 

ಧನವಿನಿಯೋಗ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುವ ವೇಳೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ತಿಪಣ್ಣಪ್ಪ ಕಮಕನೂರ ಅವರು ಕೋಲಿ ಸಮಾಜ ಎಸ್ಟಿ ಸೇರ್ಪಡೆ ಬೇಡಿಕೆಯಾಗಿದೆ ಇದನ್ನು ಈಡೇರಿಸುವ ನಿಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ ಹಿಂದುಳಿದ ಸಮಾಜಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಬಿ ಎಸ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು

ಯಡಿಯೂರಪ್ಪ ಅವರನ್ನು ಅಭಿನಂದಿಸಿದ ತಿಪ್ಪಣ್ಣಪ್ಪ ಅವರು ರಾಜ್ಯದಲ್ಲಿ ಎಷ್ಟೋ ಜನ ಮುಖ್ಯಮಂತ್ರಿಗಳಾಗಿದ್ದಾರೆ ಆದರೆ ಅವರು ತಮ್ಮ ಅಧಿಕಾರವಧಿಯಲ್ಲಿ ಏನು ಕೆಲಸ ಮಾಡಿದ್ದಾರೆ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಿಸಲಾಗುತ್ತದೆ ಇದನ್ನು ಲಕ್ಷದಲ್ಲಿ ಇಟ್ಟುಕೊಂಡು ರಾಜ್ಯದ ಒಳಿತಿಗೆ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚುವರಿಯಾಗಿ ಇನ್ನೂ 1000 ಕೋಟಿ ಅನುದಾನ ಕೊಡಿ ಎಂದು ಒತ್ತಾಯಿಸಿದರು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಈ ವರ್ಷವು ಮಳೆ ಬಾರದೆ ರೈತರು ಕಂಗಾಲಾಗುವ ಸ್ಥಿತಿ ನಿರ್ಮಾಣಗೊಂಡಿದೆ ಯಾವುದೇ ಬೆಳೆ ಬೆಳೆ ಬೆಳೆಯುವುದಕ್ಕೆ ಸಾಧ್ಯವಾಗುತ್ತಿಲ್ಲ ಜನರು ನಗರಗಳಿಗೆ ಗುಳೆ ಹೋಗುತ್ತಿದ್ದಾರೆ ಆದ್ದರಿಂದ ಕೂಡಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು

Be the first to comment

Leave a Reply

Your email address will not be published.


*