ಇಶಾ ಫೌಂಡೇಶನ್ ವತಿಯಿಂದ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯ ಕಿಟ್ ವಿತರಣೆ

ವರದಿ:ಅಂಬಿಗ ನ್ಯೂಸ್ ತಂಡ

ರಾಜ್ಯ ಸುದ್ದಿಗಳು

ಚಿಕ್ಕಬಳ್ಳಾಪುರ:

CHETAN KENDULI

ಕೋವಿಡ್ ಎರಡನೆ ಅಲೆಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಮನಗಂಡು ರಾಜ್ಯ ಅಲೆಮಾರಿ ಯುವಘಟಕದ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಮಾನ್ಪಡೆಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅಲೆಮಾರಿ ಬುಡಕಟ್ಟುಗಳಿಗೆ ಆಹಾರ ಸಾಮಾಗ್ರಿ ಪೂರೈಸಬೇಕೆಂದು ಕೋರಿಕೊಳ್ಳಲಾಗಿತ್ತು.

ಮನವಿಗೆ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು
ಇಶಾ ಫೌಂಡೇಶನ್ ವತಿಯಿಂದ ಜಿಲ್ಲೆಗೆ ನೀಡಲಾಗಿದ್ದ ಆಹಾರ ಧಾನ್ಯ ಕಿಟ್ ಗಳನ್ನು ಇಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರ ಉಪಸ್ಥಿತಿಯಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕು, ಆವಲಗುರ್ಕಿ ಗ್ರಾಮ ಪಂಚಾಯಿತಿಯ, ಸೋಲಕುಂಟೆ ಗ್ರಾಮದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಿದರು.

ಈ ಸಂಬಂಧವಾಗಿ ಮಾನ್ಯ ಸಚಿವರಿಗೆ, ಹಾಗೂ ಮಾನ್ಯ ಜಿಲ್ಲಾಧಿಕಾರಿಗಳಿಗೆ ಅಲೆಮಾರಿ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ತಿಳಿಸಲಾಯಿತು.

Be the first to comment

Leave a Reply

Your email address will not be published.


*