ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದ ಸಚಿವ ಹೆಬ್ಬಾರ್

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಯಲ್ಲಾಪುರ: ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರಕಾರಿ ಪಾಲಿಟೆಕ್ನಿಕ್, ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರ ಟ್ಯಾಬ್ ಪಿಸಿ ಅನ್ನು ವಿತರಿಸಲಿದ್ದು, ಬುಧವಾರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ‘ಟ್ಯಾಬ್ ಪಿಸಿ’ ಯನ್ನು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ವಿತರಿಸಿದರು.

ನಂತರ ಕಾಲೇಜಿನ ನೂತನ ಐ.ಸಿ.ಟಿ ತರಗತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಹಾಗೂ ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಜಿ ಗಾಂವ್ಕರ್, ಪ್ರಮುಖರಾದ ವಿಜಯ ಮಿರಾಶಿ, ತಹಶೀಲ್ದಾರ ಕೃಷ್ಣ ಕಾಮ್ಕರ್, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*