ನಿಯಂತ್ರಣ ತಪ್ಪಿದ ಕಾರ್ ಪಲ್ಟಿ; ದೂರು ದಾಖಲು

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಕುಮಟಾ: ಚಾಲಕನ ನಿಷ್ಕಾಳಜಿ ಹಾಗೂ ಅತೀವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಬಿದ್ದು, ಸಂಪೂರ್ಣ ಜಖಂಗೊಂಡ ಘಟನೆ ಶುಕ್ರವಾರ ತಾಲೂಕಿನ ಹಂದಿಗೋಣ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕುಮಟಾದಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹೊಸದಾದ ಕಾರು ಸಂಪೂರ್ಣ ಜಖಂಗೊಂಡಿದೆ. ಚಾಲಕ ಬಗ್ಗೋಣದ ರವಿ ನಾಯ್ಕ ನಿಷ್ಕಾಳಜಿಯಿಂದ ವಾಹನ ಚಾಲನೆ ಮಾಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಶಬರೀಶ ನಾಯ್ಕ ಕುಮಟಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಈ ಬಗ್ಗೆ ಕುಮಟಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment

Leave a Reply

Your email address will not be published.


*