ವಿ.ಆರ್ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ  ಅವರಿಂದ ಭಟ್ಕಳ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಸುರಕ್ಷತೆಯ ಕಿಟ್ ವಿತರಣೆ 

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿ 

CHETAN KENDULU

ಭಟ್ಕಳ : ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಬುಧವಾರ ದೇಶಪಾಂಡೆ ಫೌಂಡೇಶನ್ ಟ್ರಸ್ಟ್ ಮೂಲಕ ಸುರಕ್ಷತೆಯ ಕಿಟ್ ವಿತರಿಸಲಾಗಿದೆ.

ಕೋವಿಡ್-19 ವಿರುದ್ಧ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದಾರೆ.ಮನೆ ಮನೆಗೆ ತೆರಳಿ ಮುಂಜಾಗ್ರತಾ ಕ್ರಮದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅವರ ಸುರಕ್ಷತೆಯ ದೃಷ್ಟಿಯಿಂದ ಮಾಸ್ಕ್ ,ಸ್ಯಾನಿಟೈಸರ್ ಹಾಗೂ ಸುರಕ್ಷತೆ ಕಿಟ್ ವಿತರಿಸಲಾಗಿದೆ.

ಮಾಜಿ ಶಾಸಕ ಮಂಕಾಳ್ ವೈದ್ಯ ನೇತೃತ್ವದಲ್ಲಿ ಬುದುವಾರ ಭಟ್ಕಳ ಕಮಲಾ ಬಾಯಿ ಶಾನಭಾಗ್ ಸಭಾಂಗಣದಲ್ಲಿ ಸುರಕ್ಷತಾ ಕಿಟ್ಟನ್ನು ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಟಿ.ಡಿ.ನಾಯ್ಕ, ಅಬ್ದುಲ್ ಮಜೀದ್, ಭಟ್ಕಳ ಕಾಂಗ್ರೆಸ್ ಮುಂಖಡರು , ಮುಂತಾದವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*