ಬಣಜಿಗ ಸಂಘಕ್ಕೆ ಅಂದಪ್ಪ ಜವಳಿ ರಾಜ್ಯಾಧ್ಯಕ್ಷ

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿಗಳು 

ಕೊಪ್ಪಳ

ಜುಲೈ 25: ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಕುಕನೂರಿನ ಅಂದಪ್ಪ ಜವಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿಜಯಪುರದಲ್ಲಿ ಶನಿವಾರ ನಡೆದ ರಾಜ್ಯ ಕಾರ್ಯಕಾರಿಣಿ ಮಂಡಳಿ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆಯಿತು. ಪ್ರಾರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಲ್ವರಿಂದ ಉಮೇದುವಾರಿಕೆ ಬಂದಿದ್ದವು. ಆದರೆ, ಅಂತಿಮವಾಗಿ ಅವನ್ನು ವಾಪಾಸ್‌ ಪಡೆದಿದ್ದರಿಂದ, ಅಂದಪ್ಪ ಜವಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿದ್ದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ಸಬರದ ಅವರು ಪ್ರಕಟಿಸಿದರು.ಸಂಘದ ಸ್ಥಾಪನೆಯ ದಿನಗಳಿಂದ ಪದಾಧಿಕಾರಿಯಾಗಿರುವ ಅಂದಪ್ಪ ಜವಳಿ ಅವರು ಬಣಜಿಗ ಸಮಾಜದ ಸಂಘಟನೆಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲ ಕಡೆ ನಿರಂತರ ಸಂಚರಿಸಿ, ಜಾಗೃತಿ ಮೂಡಿಸುವ ಮೂಲಕ ಸಂಘಟನೆ ಬಲಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

CHETAN KENDULI

*ಅಭಿನಂದನೆ:* ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಅಂದಪ್ಪ ಜವಳಿ ಅವರನ್ನು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಸಂಸದ ಶಿವಕುಮಾರ ಉದಾಸಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ನಾಡಿನ ಹಲವಾರು ಗಣ್ಯರು ಅಭಿನಂದಿಸಿದ್ದಾರೆ. ಅವರ ನೇತೃತ್ವದಲ್ಲಿ ಸಂಘ ಇನ್ನಷ್ಟು ಜನಪರ ಕೆಲಸಗಳನ್ನು ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.
ವಿಜಯಪುರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕಾರಿಣಿ ಮಂಡಳಿ ಸಭೆಯಲ್ಲಿ ಕೊಪ್ಪಳ ಜಿಲ್ಲೆ ಕುಕನೂರಿನ ಅಂದಪ್ಪ ಜವಳಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Be the first to comment

Leave a Reply

Your email address will not be published.


*