ಯುವಕರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು : ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಯುವಕರು ಬಿಜೆಪಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವುದರ ಮೂಲಕ ಪಕ್ಷ ಬಲವರ್ಧನೆಗೆ ಶ್ರಮಸಿಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್ ತಿಳಿಸಿದರು.ಪಟ್ಟಣದ ಶಿವಕುಮಾರಸ್ವಾಮಿ ವೃತ್ತದಲ್ಲಿರುವ ಬಿಜೆಪಿ ಕಚೇರಿಯಲ್ಲಿ ತಾಲೂಕಿನ ಬಿಜೆಪಿ ಮಹಾಶಕ್ತಿ ಕೇಂದ್ರಗಳಿಗೆ ನೂತನ ಅಧ್ಯಕ್ಷರುಗಳನ್ನಾಗಿ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೇಂದ್ರ ಮತ್ತು ಬಿಜೆಪಿ ಸರಕಾರ ಬಂದಾಗಿನಿಂದಲೂ ಕೊರೊನಾ ಸಂಕಷ್ಟದ ನಡುವೆಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡುತ್ತ ಬರಲಾಗುತ್ತಿದೆ. ಪ್ರತಿ ಕಾರ್ಯಕರ್ತರಿಗೂ ಪಕ್ಷದ ತತ್ವ ಸಿದ್ಧಾಂತಗಳನ್ನು ತಿಳಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವ ಕೆಲಸ ಯುವಕರು ಮಾಡುವಂತೆ ಆಗಬೇಕು ಎಂದು ಕರೆ ನೀಡಿದರು.

CHETAN KENDULI

ನೂತನ ಅಧ್ಯಕ್ಷರು : ಮಹಾಶಕ್ತಿ ಕೇಂದ್ರದ ದೇವನಹಳ್ಳಿ ನಗರ ಅಧ್ಯಕ್ಷ ಎಸ್.ಸಂದೀಪ್, ವಿಜಯಪುರ ನಗರ ಅಧ್ಯಕ್ಷ ಆರ್.ಸಿ.ಮಂಜುನಾಥ್, ಆವತಿ ತಮ್ಮಯ್ಯ, ಕಾರಹಳ್ಳಿ(ಬಿಜ್ಜವಾರ) ನವೀನ್‌ಕುಮಾರ್, ಯಲಯೂರು(ಚನ್ನರಾಯಪಟ್ಟಣ) ಪ್ರಕಾಶ್, ಬೂದಿಗೆರೆ ಕಮಲೇಶ್, ಸಾದಹಳ್ಳಿ(ಕುಂದಾಣ) ಸೋಮಶೇಖರ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.ನೂತನ ನಗರ ಅಧ್ಯಕ್ಷ ಎಸ್.ಸಂದೀಪ್ ಮಾತನಾಡಿ, ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಮಾಣಿಕವಾಗಿ ಮಾಡಲಾಗುತ್ತದೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಪಕ್ಷದ ಶಕ್ತಿವರ್ಧನೆಗೆ ಶ್ರಮಿಸಲಾಗುತ್ತದೆ. ಹಿರಿಯರ ಮಾರ್ಗದರ್ಶನ ಮತ್ತು ಸಲಹೆಯನ್ನು ಪಡೆದು ಮುಂದಾಗಲಾಗುವುದು ಎಂದು ಹೇಳಿದರು.

Be the first to comment

Leave a Reply

Your email address will not be published.


*