ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಪ್ರಸಕ್ತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೇಡಿಟ್ ಕಿರು ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಅರೆಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಹಾಗೂ ಆದಿವಾಸಿ ಜನಾಂಗದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಜಾತಿ, ಆದಾಯ, ಆಧಾರ, ರೇಶನ ಕಾರ್ಡ, ಫೋಟೊ, ಗಂಗಾ ಕಲ್ಯಾಣ ಯೋಜನೆಯಡಿ ಕಡ್ಡಾಯವಾಗಿ ಸಣ್ಣ ಹಿಡುವಳಿ ಪ್ರಮಾಣ ಪತ್ರ ಹಾಗೂ ಇತರೆ ಎಲ್ಲಾ ದಾಖಲಾತಿಗಳ ಪ್ರತಿಯನ್ನು ಲಗತ್ತಿಸಬೇಕು. ಅರ್ಜಿ ಸಲ್ಲಿಸುವವರು 60 ವರ್ಷ ವಯಸ್ಸು ಮೀರಿರಬಾರದು.

ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಸಲ್ಲಿಸುವ ಅರ್ಜಿಗಳಲ್ಲಿ ಜಮೀನು 1 ಎಕರೆ 20 ಗುಂಟೆಗಿಂತ ಕಡಿಮೆ ಇರುವ ಹಾಗೂ ಈಗಾಗಲೇ ಸಾಲ ಸೌಲಭ್ಯ ಪಡೆದವರಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ಆಗಸ್ಟ 25 ರೊಳಗಾಗಿ http://kmbvstdcl.karnataka.gov.in ಆನ್‍ಲೈನ್ ಮೂಲಕ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 08354-235016 ಗೆ ಸಂಪರ್ಕಿಸಬಹುದಾಗಿದೆ.

Be the first to comment

Leave a Reply

Your email address will not be published.


*