ಕಾರ್ಮಿಕ ಇಲಾಖೆ : ಬಾಕಿ ಅರ್ಜಿಗಳ ವಿಲೇವಾರಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಬಾಕಿ ಅರ್ಜಿಗಳ ವಿಲೇವಾರಿಗಾಗಿ ಜಿಲ್ಲಾದ್ಯಾಂತ ಕಾರ್ಮಿಕ ಅದಾಲತ್ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದು ಸೆಪ್ಟೆಂಬರ 1 ರಿಂದ 5 ವರೆಗೆ ಕಾರ್ಮಿಕರ ಸಮಸ್ಯೆಗಳನ್ನು ಕುರಿತು ಅರ್ಜಿ ಸ್ವೀಕರಿಸಲಾಗುತ್ತದೆ.

ಸೆಪ್ಟೆಂಬರ 6 ರಿಂದ 16 ವರೆಗೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಅರ್ಹರು ಸ್ವೀಕೃತ ಪತ್ರ, ಬ್ಯಾಂಕ್ ಖಾತೆಯ ವಿಲೀನವಾದ ವಿವರ ಸೇರಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಅಥವಾ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿ ಭೇಟಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್, ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*