ಮದುವೆ ಆಗಲು ಹುಡುಗಿಯರು ಮುಂದೆ ಬರ್ತಿಲ್ಲ, ನಮಗೆ ಮದುವೆ ಮಾಡಿಸಿ: ತುಮಕೂರು ಡಿಸಿಗೆ ಯುವಕರ ಪತ್ರ!

ವರದಿ-ಕುಮಾರ್ ನಾಯ್ಕ.ಉಪಸಂಪಾದಕರು

ಜಿಲ್ಲಾ ಸುದ್ದಿಗಳು 

ತುಮಕೂರು

ಸರ್​​ ನಮ್ಮನ್ನ ಮದುವೆ ಆಗಲು ಯಾರೂ ಮುಂದೆ ಬರ್ತಿಲ್ಲ. ನಮಗೆ ಮದುವೆ ಮಾಡಿಸಿ ಎಂದು ಜಿಲ್ಲಾಧಿಕಾರಿಗೆ ಯುವಕರು ಪತ್ರ ಬರೆದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕಿನ ತಿಮ್ಲಾಪುರ ಯುವಕರಿಂದ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಡಿಸಿಗೆ ಪತ್ರ ಬರೆದು 7 ಯುವಕರು ಅಳಲು ತೋಡಿಕೊಂಡಿದ್ದಾರೆ. ನಾವು ರೈತರಾಗಿರುವುದರಿಂದ ನಮಗೆ ವಧು ಸಿಗುತ್ತಿಲ್ಲ ಎಂದು ಹೇಳಿರುವ ಅವರು ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಬಗೆಹರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ಗೆ ಯುವಕರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

CHETAN KENDULI

ನಾವು ರೈತರಾಗಿರುವುದರಿಂದ ನಮಗೆ ವಧು ಸಿಗುತ್ತಿಲ್ಲ ಎಂದು ಹೇಳಿರುವ ಅವರು ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಬಗೆಹರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ಗೆ ಯುವಕರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

Be the first to comment

Leave a Reply

Your email address will not be published.


*