ಸಕಲ ಸರ್ಕಾರಿ ಗೌರವದೊಂದಿಗೆ ಅಪ್ಪು ಅಂತ್ಯಕ್ರಿಯೆ…

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

ಬೆಂಗಳೂರು

ದೊಡ್ಮನೆಯ ಪ್ರೀತಿಯ ಕುಡಿ ಅಪ್ಪು ಅಸ್ತಂಗತರಾಗಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಪಾಲಿನ ಆರಾಧ್ಯದೈವ ಪುನೀತ್ ರಾಜ್​ಕುಮಾರ್ ಅಂತ್ಯಸಂಸ್ಕಾರ ನಡೆಯುತ್ತಿದೆ.

CHETAN KENDULI

ರಾತ್ರಿಯಿಡೀ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಅಭಿಮಾನಿಗಳು ಆಗಮಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಕಂಠೀರವ ಸ್ಟೇಡಿಯಂ ನಿಂದ ಕಂಠೀರವ ಸ್ಟೂಡಿಯೋಗೆ ಅಪ್ಪು ಅಂತಿಮ ಯಾತ್ರೆ ಸಾಗಿದ್ದು,

ಎಲ್ಲಾ ಸರ್ಕಾರಿ ಗೌರವಗಳನ್ನ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಅಪ್ಪುಗೆ ನೀಡಲಾಗಿದ್ದು, ಅಪ್ಪು ಮೈಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನ ಪುನೀತ್​ ಪತ್ನಿ ಅಶ್ವಿನಿ ಹಾಗೂ ಇಬ್ಬರು ಪುತ್ರಿಯರಿಗೆ ಬೊಮ್ಮಾಯಿ ಹಸ್ತಾಂತರಿಸಿದ್ದಾರೆ.

Be the first to comment

Leave a Reply

Your email address will not be published.


*