ಮುರುಡೇಶ್ವರ ಶಿವನ ಮೂರ್ತಿಯನ್ನು ವಿಕ್ರತಿಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳಲು ಮಾಜಿ ಶಾಸಕ ಮಂಕಾಳು ವೈದ್ಯ ಸರ್ಕಾರಕ್ಕೆ ಆಗ್ರಹ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಮುರ್ಡೇಶ್ವರ

ಹಿಂದುಗಳ ಧಾರ್ಮಿಕ ಕ್ಷೇತ್ರ ಮತ್ತು ವಿಶ್ವದಲ್ಲೆ ಪ್ರಸಿದ್ಧಿ ಗಳಿಸಿರುವ ಪ್ರವಾಸಿ ತಾಣ ಮುರ್ಡೇಶ್ವರ ಕ್ಷೇತ್ರವಾಗಿದೆ. ಐಎಸ್‌ಐಎಸ್ ಸಂಘಟನೆಯ “ವೈಸ್ ಆಫ್ ಹಿಂದ್” ಎಂಬ ಪತ್ರಿಕೆಯೊಂದು ನನ್ನ ಕ್ಷೇತ್ರಕ್ಕೊಳಪಡುವ ಮುರ್ಡೇಶ್ವರ ದೇವಸ್ಥಾನದ ಶಿವನ ಮೂರ್ತಿಯನ್ನು ಕೆಡವುವಂತೆ ತನ್ನ ಮುಖಪಟದಲ್ಲಿ ಪ್ರಕಟ ಮಾಡಿ, ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ ಮಾಜಿ ಶಾಸಕ ಮಂಕಾಳ ವೈದ್ಯ ಅವರು, ನನ್ನ ಕ್ಷೇತ್ರದಲ್ಲಿ ಇಂತಹ ಯಾವುದೇ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರವಹಿಸಬೇಕು. ಇಂಥ ಸೂಕ್ಷö್ಮ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳದೇ, ಸರ್ಕಾರ ಮತ್ತು ಜಿಲ್ಲಾಡಳಿತ ಈ ಪ್ರಕರಣದ ಗಂಭೀರತೆಯನ್ನು ಅರಿತುಕೊಂಡು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಈ ಪ್ರಕರಣದ ಹಿಂದಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ, ಕಾನೂನು ರೀತಿಯ ಕಠಿಣ ಶಿಕ್ಷೆ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ. ದೇಶದ ಪ್ರಸಿದ್ಧ ಪ್ರವಾಸಿ ತಾಣವಾದ ಮುರ್ಡೇಶ್ವರಕ್ಕೆ ಸೂಕ್ತ ಭದ್ರತೆ ಒದಗಿಸುವ ಮೂಲಕ ಸಂಭವನೀಯ ಅನಾಹುತವನ್ನು ತಪ್ಪಿಸಬೇಕು ಎಂದು ಮಾಜಿ ಶಾಸಕ ಮಂಕಾಳು ವೈದ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

CHETAN KENDULI

Be the first to comment

Leave a Reply

Your email address will not be published.


*