ಜೋಗ ಜಲಪಾತ ವೀಕ್ಷಿಸಿದ ರಾಜ್ಯಪಾಲರು

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಸಿದ್ದಾಪುರ 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜೋಗ ಜಲಪಾತಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿದರು. ಗುರುವಾರ ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನದ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು.

CHETAN KENDULI

ಜೋಗದ ವೈಭವ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕಾರಿಗಳ ಜೊತೆಗೆ ಫೋಟೋ ಸೆಷನ್ ನಡೆಸಿದರು. ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ರಕ್ಷಣಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಕುಮುಟ ಉಪ ವಿಭಾಗಾಧಿಕಾರಿ ರಾಹುಲ್ ಪಾಂಡೆ ಸೇರಿದಂತೆ ಹಲವರು ಇದ್ದರು. ಎಲ್ಲರೊಂದಿಗೂ ರಾಜ್ಯಪಾಲರು ಫೋಟೊ ಕ್ಲಿಕ್ಕಿಸಿಕೊಂಡರು.

Be the first to comment

Leave a Reply

Your email address will not be published.


*