ಮುರುಡೇಶ್ವರ ದೇವಸ್ಥಾನಕ್ಕೆ ಹೆಚ್ಚಿನ ಭಧ್ರತೆ ನೀಡಲು ಭಟ್ಕಳ್ ಶಾಸಕ ಸುನೀಲ್ ನಾಯ್ಕ ಹೋಮ್ ಮಿನಿಸ್ಟರ್ ಮನವಿ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಭಟ್ಕಳ್

ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ನೀಡಬೇಕೆಂದ್ರು ಭಟ್ಕಳ ಶಾಸಕ ಸುನಿಲ್ ನಾಯಕ್ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದಾರೆ.ಉಗ್ರರ ಟಾರ್ಗೆಟ್ ಆಯ್ತಾ ಮುರುಡೇಶ್ವರ ಕ್ಷೇತ್ರ..? ಸೋಷಿಯಲ್​​ ಮೀಡಿಯಾದಲ್ಲಿ ಹರಿದಾಡ್ತಿದೆ ಬೆದರಿಕೆ ಮೆಸೇಜ್​​​.!ಮುರುಡೇಶ್ವರ ಕ್ಷೇತ್ರದ ಶಿವ ಪ್ರತಿಮೆಯನ್ನು ಧ್ವಂಸಗೊಳಿಸುವಂತೆ voice of Hind ಎಂಬ ಪತ್ರಿಕೆಯ ಮುಖಪುಟದಲ್ಲಿ ಪ್ರಕಟಪಡಿಸಿಲಾಗಿತ್ತು.

CHETAN KENDULI

ಈ ಹಿನ್ನೆಲೆಯಲ್ಲಿ ಗೃಹ ಸಚಿವರ ಸರ್ಕಾರಿ ನಿವಾಸದಲ್ಲಿ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದ ಸುನಿಲ್ ನಾಯಕ್ ಅವರು ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ಒದಗಿಸಬೇಕು ಮತ್ತು ಆ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು ಪ್ರಕರಣದ ತನಿಖೆ ನಡೆಸಲಾಗುತ್ತಿದೆ, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

Be the first to comment

Leave a Reply

Your email address will not be published.


*