ಸಿದ್ದರಾಮಯ್ಯ ಒಬ್ಬ ವೆಸ್ಟ್ ಬಾಡಿ – ಮಾಜಿ ಸಚಿವ ರಮೇಶ್ ಜಾರಕಿಹೊಳಿ…!!!

ವರದಿ: ಕುಮಾರ್ ನಾಯ್ಕ್, ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಗೋಕಾಕ:

CHETAN KENDULI

ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲಲು ಕಾರಣವೇನು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ತಮ್ಮದೇ ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕವಟಗಿಮಠ ಸೋಲನುಭವಿಸಲು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದಿದ್ದಾರೆ.

ಪರಿಷತ್ ಚುನಾವಣೆಗೂ ಮೊದಲು ಕೆಲ ರಾಜಕೀಯ ಬೆಳವಣಿಗೆ ನಡೆದಿದೆ. ಚುನಾವಣೆಗೆ 4 ದಿನಗಳ ಮೊದಲು ಬೆಳಗಾವಿ ರಾಜಕೀಯದಲ್ಲಿ ಕೆಲ ವಿದ್ಯಮಾನಗಳಾಗಿವೆ. ಈ ಎಲ್ಲಾ ವಿಚಾರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭಯ ಶುರುವಾಗಿದೆ. ಅವರೊಬ್ಬ ವೇಸ್ಟ್ ಬಾಡಿ. ಇನ್ನು ಡಿ.ಕೆ.ಶಿವಕುಮಾರ್ ಬಗ್ಗೆ ಮುಂದೆ ಮಾತಾಡುತ್ತೇನೆ ಎಂದು ಹೇಳಿದರು.

Be the first to comment

Leave a Reply

Your email address will not be published.


*