ದೂರು ನೀಡಲು ಬಂದ ಮಹಿಳೆಯನ್ನ ಮಂಚಕ್ಕೆ ಕರೆದ ಆರೋಪ: ಸಿ.ಪಿ.ಐ ಸಸ್ಪೆಂಡ್…

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಹಾವೇರಿ

ದೂರು ನೀಡಲು ಬಂದ ಸಂತ್ರಸ್ತೆಯ ತಾಯಿಯನ್ನೇ ಮಂಚಕ್ಕೆ ಕರೆದ ಆರೋಪದ ಮೇಲೆ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಪಿಐ ಚಿದಾನಂದರನ್ನ ಅಮಾನತು ಮಾಡಲಾಗಿದೆ.ದೂರು ನೀಡಲು ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿ ಸುವುದು ಅಲ್ಲದೇ ಅವರ ಜೊತೆಗೆ ವಿಡಿಯೋ ಕಾಲ್ ಮಾಡಿ ಅಸಭ್ಯ ವರ್ತಿಸುತ್ತಿದ್ದ ಆರೋಪ ಚಿದಾನಂದ್ ವಿರುದ್ದ ಕೇಳಿಬಂದಿತ್ತು.

CHETAN KENDULI

ಪ್ರಸ್ತುತ ಆ ವಿಡಿಯೋಗಳು ವೈರಲ್ ಆದ ಹಿನ್ನೆಲೆ ಸಿಪಿಐ ಚಿದಾನಂದ್ ರನ್ನು ​ ಇಲಾಖೆಯಿಂದ ಅಮಾನತು ಮಾಡಲಾಗಿದೆ. ಠಾಣೆಗೆ ದೂರು ನೀಡಲು ಬರುವ ಮಹಿಳೆಯರ ಫೋನ್​ ಸಂಖ್ಯೆ ತೆಗೆದುಕೊಂಡು ವಿಡಿಯೋ ಕರೆ ಮಾಡಿ ಅವರ ಜೊತೆ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯ​ ಆರೋಪಿ ಸಿಪಿಐ ಚಿದಾನಂದ ಅಸಭ್ಯವಾಗಿ ವರ್ತಿಸುತ್ತಿದ್ದರು. ಅಲ್ಲದೆ, ಸಿಪಿಐ ದೂರು ನೀಡಲು ಬರುವ ಮಹಿಳೆಯರ ಜೊತೆ ಠಾಣೆಯಲ್ಲಿಯೇ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದರು ಎಂದು ಹೇಳಲಾಗ್ತಿದೆ. ಪ್ರಸ್ತುತ ಮಹಿಳೆಯರ ಜೊತೆ ಅಸಭ್ಯವಾಗಿ ಮಾತನಾಡಿರುವ ವಿಡಿಯೋಗಳು ವೈರಲ್ ಆಗಿದೆ. ಚಿದಾನಂದ ಬಾತ್ ರೂಂನಲ್ಲಿದ್ದಾಗ ಮಹಿಳೆಯರಿಗೆ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದರು.

ಫೋನ್​ನಲ್ಲಿ ಕೆಟ್ಟದಾಗಿ ಮಾತನಾಡಿದ್ದರು. ಓರ್ವ ಮಹಿಳೆಗೆ ಮಂಚಕ್ಕೆ ಕರೆದಿದ್ದ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಹಿನ್ನೆಲೆ ಈತನ ವಿರುದ್ಧ ಎಸ್‍ಪಿ, ಪೂರ್ವ ವಲಯ ಐಜಿಪಿ ರವಿ.ಎಸ್ ಸೇರಿದಂತೆ ಹಲವರಿಗೆ ಮಹಿಳೆಯರು ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಪೂರ್ವ ವಲಯ ಐಜಿಪಿ ಹಾಗೂ ಅಧಿಕಾರಿಗಳು ಚಿದಾನಂದ ಬಗ್ಗೆ ತನಿಖೆ ಮಾಡಿದ್ದಾರೆ. ನಂತರ ಅವರನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.

Be the first to comment

Leave a Reply

Your email address will not be published.


*