ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಲೈನ್ ಮ್ಯಾನ್!

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ದಾವಣಗೆರೆ

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೈನ್ ಮ್ಯಾನ್ ವೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಸದ್ಯ ಲೈನ್ ಮ್ಯಾನ್ ನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು ಎಂದು ವರದಿಯಾಗಿದೆ. ಹಿಟ್ಟಿನ ಗಿರಣಿ ಮಾಲಿಕನಿಂದ 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ.

CHETAN KENDULI

ದಾವಣಗೆರೆಯ ಶ್ರಿರಾಮ್ ಎಂಬುವರು ಹಿಟ್ಟಿನ ಗಿರಣಿಯ ಬಾಕಿ ಬಿಲ್ ಗೆ 15 ಸಾವಿರ ದಂಡ ಪಾವತಿಸಬೇಕಿತ್ತು. ಶ್ರೀರಾಮ್ ಎನ್ನುವರಿಗೆ ದಂಡವನ್ನು ಸರಿಪಡಿಸಲು ರವಿಕುಮಾರ್ ಐದು ಸಾವಿರ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಹಿಟ್ಟಿನ ಗಿರಣಿ ಮಾಲೀಕ ಶ್ರೀರಾಮ್ ಎಸಿಬಿ ಗೆ ದೂರು ಸಲ್ಲಿಸಿದ್ದರು. ಬುಧವಾರ ಬೆಳಗ್ಗೆ ಕಚೇರಿ ಆವರಣದಲ್ಲಿರುವ ಗಣೇಶ ದೇವಸ್ಥಾನದ ಬಳಿ 5 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದೆ.

Be the first to comment

Leave a Reply

Your email address will not be published.


*