ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

ವರದಿ:ಕುಮಾರ ನಾಯ್ಕ

ಹಾಸನ:

ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ರೆಡ್​​ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

CHETAN KENDULI

ಹಾಸನ ತಾಲೂಕಿನ ಕೌಶಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುಷ್ಪಲತಾ ಹಾಗೂ ಪಿಡಿಒ ಮಂಜುನಾಥ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಇವರು ಪೌತಿ ಖಾತೆ ಮಾಡಿಕೊಡಲು ಮುಂಗಡವಾಗಿ 2,100 ರೂ. ಮುಂಗಡವಾಗಿ ಪಡೆದಿದ್ದಲ್ಲದೇ, ಪುನಃ 500 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಸುರೇಶ್ ಎಂಬವರು ಎಸಿಬಿಗೆ ದೂರು ನೀಡಿದ್ದರು.

ನಿನ್ನೆ ಸಂಜೆ ಲಂಚ ಪಡೆಯುವಾಗ ಎಸಿಬಿ ಡಿವೈಎಸ್‌ಪಿ ಸತೀಶ್, ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ವೀಣಾ ಹಾಗೂ ಸಿಬ್ಬಂದಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.

Be the first to comment

Leave a Reply

Your email address will not be published.


*