ಸದನದಲ್ಲಿ ಕಾಂಗ್ರೆಸ್ ಧರಣಿ ಕಂಡಿಸಿ ಬಿಜೆಪಿ ಪ್ರತಿಭಟನೆ

ವರದಿ ಅಂಭಿಗ್ ನ್ಯೂಸ್

ರಾಜ್ಯ ಸುದ್ದಿಗಳು 

 ಲಿಂಗಸೂಗೂರು

ಕಾಂಗ್ರೆಸ್ ಜನವಿರೋಧಿ ನೀತಿಗಳ ಖಂಡಿಸಿ. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ. ದೇಶದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗಬಾರದು ಅಭಿವೃದ್ಧಿ ಕೆಲಸ ಮಾಡಿದರೆ ಬಿಜೆಪಿ ಪಕ್ಷಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಕಾಂಗ್ರೆಸ್ ಪಕ್ಷ ಸೈಸಿ ಕೊಳಲು ಆಗುತ್ತಿಲ್ಲ. ಎಂದು ಕಾಂಗ್ರೆಸ್ ಪಕ್ಷದ ವಿರುದ್ಧಬಿಜೆಪಿ ಪಕ್ಷದಿಂದ ಭಾನುವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಬಿಜೆಪಿ ಕಚೇರಿಯಿಂದ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗುತ್ತಾಹೊಸ ಬಸ್ಟಾಂಡ್ ವೃತ್ತದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. 

CHETAN KENDULI

ತಾಲೂಕು ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ ಲೇಕ್ಕಿಹಾಳ ಮಾತನಾಡಿದರು .ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷದ ಸಾಧನೆಗಳನ್ನು ನೋಡಿ ಸೈಸಿ ಕೊಳ್ಳುತ್ತಿಲ್ಲ ರಾಜ್ಯದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ ಪಕ್ಷ ಚಿಂತನೆಯನ್ನು ಮಾಡುತ್ತಿಲ್ಲ. ಆರೋಪ ಮಾಡುವುದರಲ್ಲಿ ಕಾಲಕಳೆಯುತ್ತಿದೆ.ಪಕ್ಷದ ಬಗ್ಗೆ ಇಲ್ಲಸಲ್ಲದ ಆರೋಪಮಾಡಿ ಬಿಜೆಪಿ ಪಕ್ಷದ ಬಗ್ಗೆ ಕಾಂಗ್ರೆಸ್ಸಿನವರು ರಾಜ್ಯದ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ.ಸಂವಿಧಾನದ ಅಡಿಯಲ್ಲಿ ಆಯ್ಕೆಯಾದ ಶಾಸಕರು ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆ ಮಾಡಲು ಶಾಸಕರಿಗೆ ಅವಕಾಶ ಮಾಡಿಕೊಡದೆ ಕಾಂಗ್ರೆಸ್ ಪಕ್ಷದವರು ಘೋಷಣಗಳು ಕೂಗುತ್ತಾ ಎಲ್ಲ ಮತಕ್ಷೇತ್ರದ ಶಾಸಕರು ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಸದಸ್ಯರು ಘೋಷಣೆ ಕೂಗುತ್ತಾ ಅಧಿವೇಶನಕ್ಕೆ ಅಡಿ ಪಡಿಸುವಂತೆ ಕೆಲಸ ಮಾಡುತ್ತಿದ್ದಾರೆ.

 

ಮಾರ್ಚ್ 4 ನೇ ತಾರೀಕು ಬಜೆಟ್ ಬಜೆಟ್ ಅಧಿವೇಶನವನ್ನು ತಡೆಯುವಂತಹ ಪ್ರಯತ್ನ ಮಾಡಬಹುದು ಮಾಡದೆ ಇರಬಹುದು ಇವರ ಉದ್ದೇಶ. ಪಕ್ಷದ ಸಾಧನೆಗಳನ್ನು ತಡೆಯುವುದೇ ಉದ್ದೇಶವಾಗಿದೆ. ಕಾಂಗ್ರೆಸ್ ನಾಯಕರು ಸದನದಲ್ಲಿ ಧರಣಿ ಕುಳಿತಿರುವ ದುರದೃಷ್ಟಕರವಾದ ಸಂಗತಿಯಾಗಿದೆ ಕಾಂಗ್ರೆಸ್ ನಿಂದ ಅಧಿವೇಶನ ಮೊಟಕುಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿರುವುದನ್ನು ತಡೆದು ಪ್ರತಿಭಟನೆ ಮಾಡುವುದರಲ್ಲೇ ಕಾಲ ಕಳೆಯುತ್ತಿದೆ. ಮುಂದಿನ ದಿನಮಾನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದರು.ಇದೇ ಸಂದರ್ಭದಲ್ಲಿ ತಾಲೂಕು ಯುವಮೋರ್ಚಾ ಅಧ್ಯಕ್ಷ ಈಶ್ವರ ಎಮ್ ವಜ್ಜಲ್ ಡಾ. ಶಿವಬಸಪ್ಪ ಹೇಸರೂರು ಗಿರಿ ಮಲ್ಲನಗೌಡ ಪಾಟೀಲ್ ಕರಡಕಲ್ಲ್. ಜಗನ್ನಾಥ್ ಕುಲಕರಣಿ. ಅಬ್ದುಲ್ ಬೇಕರಿ. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*