ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!!!

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು 

ಹುಬ್ಬಳ್ಳಿ, ಫೆಬ್ರವರಿ 28 :

CHETAN KENDULI

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪಾದಯಾತ್ರೆಗೆ ಬಹಳ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಮೇಕೆದಾಟು ಯೋಜನೆಯ ವಸ್ತುಸ್ಥಿತಿಯ ಅರಿವಿದ್ದರೂ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಕಾಂಗ್ರೆಸ್ ನವರ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.



ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆಗಳಿಂದ ರಾಜ್ಯದ ಜನತೆಗೆ ನೀರು ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪೂರಕ ನಿರ್ಣಯಗಳನ್ನು ಕೈಗೊಳ್ಳಲಿದೆ . ಈ ವಿಷಯದಲ್ಲಿ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Be the first to comment

Leave a Reply

Your email address will not be published.


*