ಮೀನುಗಾರಿಕೆ ಮಾಹಾಮಂಡಳ ಅಧ್ಯಕ್ಷರ ಭೇಟಿ ಮಾಡಿದ ಮೀನು ಮಾರಾಟ ಫೆಡರೇಷನ ಅಧ್ಯಕ್ಷರಾದ ಯಶಪಾಲ್ ಸುವರ್ಣ

ಮೈಸೂರ : ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ನಿ., ಮೈಸೂರು ಇದರ ಪ್ರಧಾನ ಕಚೇರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಲಿಂಗರಾಜು ರವರೊಂದಿಗೆ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳನ್ನು ಮೀನುಗಾರಿಕೆ ಮಹಾಮಂಡಲದ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಿದರು. ರಾಜ್ಯದ ಒಳನಾಡು ಮೀನುಗಾರರಿಗೆ ಮತ್ತು ಆಳ ಸಮುದ್ರ ಮೀನುಗಾರರಿಗೆ ರಾಜ್ಯ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸಲು ಶ್ರಮಿಸಲಾಗುತ್ತದೆ ಎಂದು ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರು ಮತ್ತು ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಗಳಾದ ಯಶಪಾಲ್ ಸುವರ್ಣ ತಿಳಿಸಿದರು.

Be the first to comment

Leave a Reply

Your email address will not be published.


*