ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ವಿ.ಶಾಂತಕುಮಾರ್ ನೇಮಕ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

 

ದೇವನಹಳ್ಳಿ

CHETAN KENDULI

ಜಿಲ್ಲಾ ಕಾಂಗ್ರೆಸ್ ನೂತನ ಉಪಾಧ್ಯಕ್ಷರಾಗಿ ದ್ಯಾವರಹಳ್ಳಿ ವಿ.ಶಾಂತಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಅಧಿಕೃತವಾಗಿ ಆದೇಶ ಪತ್ರ ನೀಡುವುದರ ಮೂಲಕ ನೇಮಕ ಮಾಡಿದರು.ಈ ವೇಳೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ, ವಿಧಾನಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕರಾದ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಿ.ಪ್ರಸನ್ನಕುಮಾರ್, ಜಿಲ್ಲಾ ಪ್ರಚಾರ ಸಮತಿ ಅಧ್ಯಕ್ಷ ಚೇತನ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಪ್ರಸಾದ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಆರ್.ನಾಗೇಶ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ನಾಗೇಗೌಡ, ತೂಬಗೆರೆ ಹೋಬಳಿ ಅಧ್ಯಕ್ಷ ರಂಗಪ್ಪ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಮುಖಂಡ ಹುರುಳಗುರ್ಕಿ ಸಜ್ಜಾದ್ ಮತ್ತಿತರರು ಅಭಿನಂದಿಸಿದರು.

ಜಿಲ್ಲಾ ಕಾಂಗ್ರೆಸ್ ನೂತನ ಉಪಾಧ್ಯಕ್ಷ ವಿ.ಶಾಂತಕುಮಾರ್ ಮಾತನಾಡಿ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು. ಪಕ್ಷದಲ್ಲಿ ಸುಮಾರು ವರ್ಷಗಳಿಂದ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಅದನ್ನು ಗುರ್ತಿಸಿ ಜಿಲ್ಲಾಧ್ಯಕ್ಷರು ನನ್ನನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ವೇಳೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಜನಪರ ಕೆಲಸಗಳನ್ನು ಪಕ್ಷದ ಪರವಾಗಿ ಮಾಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಹೆಚ್ಚು ಕೋವಿಡ್ ಲಸಿಕಾ ಅರಿವು, ಲಾಕ್‌ಡೌನ್ ಸಂದರ್ಭದಲ್ಲಿ ಆಹಾರದ ದಿನಸಿಕಿಟ್‌ಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗಿತ್ತು. ಕ್ರೀಡಾ ಮನೋಭಾವದಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಕ್ರೀಡಾಭಿಮಾನಿಗಳಿಗೆ ಸಹಕಾರ ನೀಡಲಾಗಿತ್ತು. ದೇವಾಲಯಗಳ ಅಭಿವೃದ್ಧಿಗೆ, ಪಕ್ಷದ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಲಾಗುತ್ತಿತ್ತು. ಎಲ್ಲಾ ರೀತಿಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಜಿಲ್ಲೆಯಲ್ಲಿ ಉತ್ತಮ ಸ್ಪಂಧನೆಯನ್ನು ಜಿಲ್ಲೆಯ ಜನರೊಂದಿಗೆ ಮಾಡಲಾಗುತ್ತದೆ. ನನ್ನನ್ನು ಅಭಿನಂದಿಸಿದ ಎಲ್ಲಾ ಕಾಂಗ್ರೆಸ್ ಮುಖಂಡರಿಗೂ, ಕಾರ್ಯಕರ್ತರಿಗೂ ಅಭಾರಿಯಾಗಿರುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

Be the first to comment

Leave a Reply

Your email address will not be published.


*