ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ , ಕುಮಟಾ ದಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ

ವರದಿ:ಕುಮಾರ ನಾಯ್ಕ

ಕುಮಟಾ :

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಲೂಕಿನ ಹೊಲನಗದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ ( 18 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಡಾ ಎ ವಿ ಬಾಳಿಗಾ ಕಾಲೇಜ್ ವಿದ್ಯಾರ್ಥಿಯಾಗಿದ್ದು , ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದಾನೆ .ಈ ವಿಷಯ ಕ್ಕೆ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈತನ ತಂದೆ ಆಟೋ ಚಾಲಕನಾಗಿದ್ದು , ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು . ಈತ ಕೂಡ ಚೆನ್ನಾಗಿ ಓದಿ ಒಳ್ಳೆಯ ನೌಕರಿ ಹಿಡಿಯುವ ಕನಸು ಕಂಡಿದ್ದ . ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಂತೆ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ . ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment

Leave a Reply

Your email address will not be published.


*