ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಭಟ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಆಚಾರ್ಯ ಶಿರಸಿ ಅವರಿಗೆ ಸನ್ಮಾನ

ಕಾರವಾರ– ಶನಿವಾರ ಚಿತ್ರದುರ್ಗದ ಬಾಪೂಜಿ ಶಿಕ್ಷಣ ವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ನೇತೃತ್ವದಲ್ಲಿ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಸಭೆ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಉತ್ತರ ಕನ್ನಡ ಜಿಲ್ಲಾ ವರದಿಗಾರರು, ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರು, ರಾಜ್ಯ ಕಾರ್ಯಕಾರಿಣಿ ಸಮಿತಿ ನಿರ್ದೇಶಕರು,ಅಂಬಿಗ ನ್ಯೂಸ್ ನ ಉಪಸಂಪಾದಕರು ಆದ ಪತ್ರಕರ್ತ ಕುಮಾರ ನಾಯ್ಕ ಭಟ್ಕಳ ಅವರ ಪ್ರತಿಕಾ ಮಾಧ್ಯಮದಲ್ಲಿ ಸಾಮಾಜಿಕ ಕಳಕಳಿಯ ಹೋರಾಟವನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ಸಮಿತಿಯವರು ಶಾಲು ಹೊದಿಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಇದೆ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಭ್ರಷ್ಟರ ಬೇಟೆ ಪತ್ರಿಕೆ ಶಿರಸಿ ತಾಲೂಕ ವರದಿಗಾರರು ಹಿರಿಯ ಪತ್ರಕರ್ತರ ಆದ ಸೀತಾರಾಮ ಆಚಾರ್ಯ ಶಿರಸಿ ಇವರನ್ನು ಕೂಡ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ ,ಪೇಟ ತೊಡಿಸಿ ಸನ್ಮಾನಿಸಿದರು. ನಂತರ ಮಾತನಾಡಿದ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಅಧ್ಯಕ್ಷರಾದ ರಮೇಶ್ ಅವರು ಕರಾವಳಿಯ ಕರ್ನಾಟಕ ಭಾಗದಲ್ಲಿ ಪತ್ರಕರ್ತರ ಸಮಸ್ಯೆಗಳಿಗೆ ಹೋರಾಟ ಮಾಡುವುದರ ಮೂಲಕ ಸರ್ಕಾರದ ಗಮನ ಸೆಳೆವುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಲಹಾ ಸಮಿತಿ ಅಧ್ಯಕ್ಷರಾದ ಡಾ.ಎಸ್.ಎಸ್ ಪಾಟೀಲ್ , ರಾಜ್ಯ ಉಪಾಧ್ಯಕ್ಷರು , ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಂ. ಶಿವಸ್ವಾಮಿ ,ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಕೋಶಾಧ್ಯಕ್ಷರಾದ ನಾಗರಾಜ್ , ರಾಜ್ಯ ಕಾರ್ಯಾಧ್ಯಕ್ಷರಾದ ಖಜಾಹುಸೇನ್, ಯಲ್ಲಪ್ಪ ಕಟ್ಟಿಕಾರ ಬೆಳಗಾವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ದಯಾನಂದ ಮುತದವರು ಉಪಸ್ಥಿತರಿದ್ದರು

Be the first to comment

Leave a Reply

Your email address will not be published.


*