ಭಟ್ಕಳದ ಡಿ.ಎಸ್.ಪಿ ಕೆ.ಯು.ಬಿಳಿಯಪ್ಪ ನೇತೃತ್ವದಲ್ಲಿ ಅಕ್ರಮ ಗಾಂಜಾ ಮಾರಾಟ ಆರೋಪಿ ಬಂಧನ

ಭಟ್ಕಳ : ಗುಳ್ಮಿ ಕ್ರಾಸ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಭಟ್ಕಳ ಡಿವೈಎಸ್ಪಿ ನೇತೃತ್ವದದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬಂಧಿತ ಆರೋಪಿ ಸಯ್ಯದ್ ಮುಸಾ ಸಯ್ಯದ್ ಅಹ್ಮದ್ ತಲಾಹಸ್ಟ್ರೀಟ್ ಹನಿಫಾಬಾದ್ ಹೆಬಳೆ ನಿವಾಸಿ ಎಂದು ತಿಳಿದು ಬಂದಿದೆ. ಈತ ಅಕ್ರಮವಾಗಿ ಒಟ್ಟು ಸುಮಾರು 2,500 ರೂಪಾಯಿ ಬೆಲೆಬಾಳುವ 209 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತಾಬಾದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ನಗದು ಹಣ 200 ರೂಪಾಯಿ ಸಮೇತ ಆರೋಪಿಯನ್ನು ಬಂಧಿಸಲಾಗಿದೆ

ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಕಲಿಸಿ ಪಿ.ಎಸ್.ಐ ಭರತ್ ತನಿಖೆ ಕೈಗೊಂಡಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಪಿ.ಎಸ್.ಐ ಭರತ್, ಭಟ್ಕಳ ಗ್ರಾಮೀಣ ಠಾಣೆ ಹವಾಲ್ದಾರ್ ದೀಪಕ್ ನಾಯ್ಕ, ಪ್ರಭಾರ ಕಂದಾಯ ನಿರೀಕ್ಷಕ ಶಂಭು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*