ಪಿಡಿಓ ಎಂ.ಉಷಾ ಲೋಕಾಯುಕ್ತ ಬಲೆಗೆ

ಬೆಂಗಳೂರು, ಫೆಬ್ರುವರಿ 17 : ಟಿ.ಬೇಗೂರು ಗ್ರಾಮ ಪಂಚಾಯತ್ ಪಿಡಿಓ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

 

ಬೆಂಗಳೂರು ಗ್ರಾಮಾಂತರ ಜಿಲ್ಲೆ ಟಿ.ಬೇಗೂರು ಗ್ರಾಮ ಪಂಚಾಯತ್ ಪಿಡಿಓ ಎಂ.ಉಷಾ ಲೋಕಾಯುಕ್ತ ಬಲೆಗೆ ಬಿದ್ದವರು. ಕಾಮಗಾರಿಯೊಂದಕ್ಕೆ ಬಿಲ್ ಮಾಡಿಸಿಕೊಡಲು ಗುತ್ತಿಗೆದಾರರೊಬ್ಬರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

 

ಗುತ್ತಿಗೆದಾರನಿಂದ 25,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈ ಎಸ್ ಪಿ ವೆಂಕಟೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪಿಡಿಓ ಉಷಾ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

 

Be the first to comment

Leave a Reply

Your email address will not be published.


*