ಬಿಜೆಪಿ ಪಕ್ಷದ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಣಸಗಿ ತಾಲೂಕಿನ ಕೋಳಿಹಾಳ ದೊಡ್ಡ ತಾಂಡಾದ ಹಲವಾರು ಬಿಜೆಪಿ ಪಕ್ಷದ ಕಾರ್ಯಕರ್ತರು ಇಂದು ಸುರಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ. ರಾಜಾ ವೆಂಕಟಪ್ಪ ನಾಯಕ ಅವರ ಅವಧಿಯಲ್ಲಾಗಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸೇರ್ಪಡೆಗೊಂಡ ಕಾರ್ಯಕರ್ತರನ್ನು ಉದ್ದೇಶಿ ಸುರಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರು ಮಾತನಾಡುತ್ತಾ ಮುಂಬರುವ‌ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ತಮ್ಮ ಮನೆ ಮಗನೆಂದು ತಿಳಿದುಕೊಂಡು ಅತೀ ಹೆಚ್ಚಿನ ಅಮನತರದಿಂದ ಜಯಶಾಲಿಯಾಗಿ‌ ತಮ್ಮೆಲ್ಲರ ಸೇವೆ ಮಾಡೋದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಬಿಜೆಪಿ ಸರ್ಕಾರದ ಹಗರಣಗಳನ್ನು ತಾವೆಲ್ಲರೂ ಪ್ರತಿನಿತ್ಯ ನೋಡ್ತಾ ಇದೀರಾ ದೃಶ್ಯ‌ ಮಾಧ್ಯಮಗಳ ಮೂಲಕ 40% ಕಮಿಷನ್ ಸರ್ಕಾರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು & ಗುತ್ತಿಗೆದಾರರ ಎಷ್ಟು ಕುಟುಂಬಗಳ ಬೀದಿ ಪಾಲಾದ ಉದಾಹರಣೆ ತಮ್ನೆಲ್ಲರ ಕಣ್ಮುಂದೆ ನೋಡಿದ್ದೀರಿ ನಿಮ್ಮ ಜೊತೆ ಯಾವುದೇ ಸಂದರ್ಭದಲ್ಲು ಕೂಡಾ ನಿಮ್ಮ ಜೊತೆ ಇಡೀ ನಮ್ಮ ಕುಟುಂಬದ ಸದಸ್ಯರು ಇದ್ದೇವೆ.

ನೀವೆಲ್ಲರೂ ಯಾವುದೇ ಪೊಳ್ಳು ಬೆದರಿಕೆಗಳಿಗೆ ಹೆದರಬೇಡಿ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

 

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಸಿದ್ಧಣ್ಣ ಮಲಗಲದಿನ್ನಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ್, ಚನ್ನಯ್ಯ ಸ್ವಾಮಿ ಹಿರೇಮಠ, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ, ಮಲ್ಲಣ್ಣ ಸಾಹು ಮುಧೋಳ್, ಭೀಮರಾಯ ಮೂಲಿಮನಿ, ಕೃಷ್ಣಾ ನಾಯ್ಕ ಜಾಧವ್ ಮಾಜಿ ಜಿಲ್ಲಾ ಪಂಚಾಯತ ಸದಸ್ಯ, ಸುರೇಶ ರಾಠೋಡ್, ಹಾಗೂ ಕೋಳಿಹಾಳ ದೊಡ್ಡ ತಾಂಡಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

Be the first to comment

Leave a Reply

Your email address will not be published.


*