ಪಟ್ಟಣಕ್ಕಿಂದು ಬಿ.ಎಸ್.ಯಡಿಯೂರಪ್ಪ ಆಗಮನ ತೆರೆದ ವಾಹನದಲ್ಲಿ ರೋಡ್ ಶೋ

ಹುಣಸಗಿ: ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕ ನರಸಿಂಹನಾಯಕ ( ರಾಜುಗೌಡ) ಅವರ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಇಂದು ಬೆಳಿಗ್ಗೆ 10:30 ಕ್ಕೆ ಹುಣಸಗಿ ಪಟ್ಟಣಕ್ಕೆ ಆಗಮಿಸಿದ್ದಾರೆ.

 

ಪ್ರಯುಕ್ತ ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವ ಮೂಲಕ ಶಾಸಕ ರಾಜುಗೌಡ ಪರವಾಗಿ ಮತದಾರರಲ್ಲಿ ಮತಯಾಚನೆ ಮಾಡಲಿದ್ದಾರೆ  ಬೆಳಿಗ್ಗೆ 10:30 ಗಂಟೆ ಅಷ್ಟೊತ್ತಿಗೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸುರಪುರ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ  ಮುಖಂಡರಾದ ಹನುಮಂತನಾಯಕ ( ಬಬ್ಲುಗೌಡ),  ವಿರೇಶ ಚಿಂಚೋಳಿ ಸೋಮಶೇಖರ್ ಸ್ಥಾವರಮಠ ಸೇರಿದಂತೆ ಇತರರು ಇದ್ದರು.

Be the first to comment

Leave a Reply

Your email address will not be published.


*