ದಾನಿಗಳ ಸಾಕಾರದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಹಿರಿಯ ಪ್ರಾಥಮಿಕ ಶಾಲೆಗೆ ಬರೆಯುವ ಪುಸ್ತಕ ಮತ್ತು ಪರಿಕರಗಳ ವಿತರಣೆ ಮಾಡಲಾಯಿತು*

ಕೊಡಗು :ಜಿಲ್ಲೆಯ ಶನಿವಾರ ಸಂತೆ ಹೋಬಳಿಯ ಬಸವನಕೊಪ್ಪ ಗ್ರಾಮದ ಪಕ್ಕದಲ್ಲಿ ಇರುವ ಗಡಿ ಭಾಗಕ್ಕೆ ಸೇರಿದ ಹಾಸನ ಜಿಲ್ಲೆಗೆ ಸೇರಿದ ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಮತ್ತು ಪರಿಕರಗಳನ್ನು ದಾನಿಗಳಾದ *ಸಿಸ್ಟರ್ ಪ್ರಸಿಲ್ಲ* ಅವರಿಂದ ವಿತರಿಸಲಾಯಿತು. *ಸಿಸ್ಟರ್ ಪ್ರೇಸಿಲ ರವರು* ಮಾತನಾಡಿ ನಾನು ಇದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು ಈ ಶಾಲೆಯಲ್ಲಿ ಓದಿ ಇಂದು ನಾನು ಕಿನ್ಯಾ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಹಾಗಾಗಿ ನಾನು ಓದಿದ ಶಾಲೆಗೆ ನನ್ನ ಕೈಲಾದ ಸಹಾಯ ಮಾಡಬೇಕೆಂದು ಈ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಪರಿಕಾರಗಳನ್ನು ವಿತರಿಸುತ್ತೇನೆ ಹಾಗೂ ಸಿಹಿಯನ್ನು ವಿತರಿಸುತ್ತಿದ್ದೇನೆ ಎಂದು ತಿಳಿಸಿದರು ಹಾಗೂ ವಿದ್ಯಾರ್ಥಿಗಳು ಚೆನ್ನಾಗಿ ಕಲಿತು ಮುಂದೆ ಬರಬೇಕು ಶಾಲೆಗೆ ಒಳ್ಳೆಯ ಹೆಸರು ತಂದುಕೊಡಬೇಕು ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತಂದುಕೊಡಬೇಕಾಗಿ ತಿಳಿಸಿದರು.

ಹಾಗೂ ಇದೇ ಸಂದರ್ಭದಲ್ಲಿ ಕರವೇ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ರಾಮನಹಳ್ಳಿ ಪ್ರವೀಣ್ ಮಾತನಾಡಿ ನಾವು ಪ್ರತಿ ವರ್ಷದಂತೆ ದಾನಿಗಳ ಸಹಕಾರದೊಂದಿಗೆ ಶಾಲೆಗಳಿಗೆ ಪುಸ್ತಕಗಳು ಮತ್ತು ಪರಿಕಾರಗಳನ್ನು ವಿತರಿಸುತ್ತಿದ್ದೇವೆ, ಯಾಕೆಂದರೆ ಸರ್ಕಾರಿ ಶಾಲೆಯ ಮಕ್ಕಳಿಗೆ ಓದಲು ಉತ್ತೇಜನ ಕೊಡುವ ಮೂಲಕ ಪ್ರತಿ ವರ್ಷ ಪುಸ್ತಕ ಮತ್ತು ಪರಿಕಾರಗಳು ವಿತರಿಸುವ ಕೆಲಸ ನಡೆಯುತ್ತದೆ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ *ಮುಖ್ಯ ಶಿಕ್ಷಕಿಯಾದ ಮಂಜುಳ ರವರು* ಮಾತನಾಡಿ ಪುಸ್ತಕಗಳನ್ನು ವಿತರಿಸುತ್ತಿರುವ ಸಿಸ್ಟರ್ ಪ್ರಶೀಲರವರಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸಿದರು.

 

 

ನಮ್ಮ ಶಾಲೆಯಲ್ಲಿ ಓದಿ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಇದು ನಮ್ಮ ಶಾಲೆಗೆ ಹೆಮ್ಮೆಯ ವಿಚಾರ ಎಂದು ತಿಳಿಸಿದರು ಹಾಗೂ ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಹಾಗೂ ಕರವೇ ತಾಲೂಕು ಕಾರ್ಯದರ್ಶಿ ರಾಮನಹಳ್ಳಿ ಪ್ರವೀಣ್ ಹಾಗೂ ಪುಸ್ತಕದಾನಿಗಳಾದ ಸಿಸ್ಟರ್ ಪ್ರಸಿಲ್ಲ ಹಾಗೂ ಮುಖ್ಯ ಶಿಕ್ಷಕಿಯಾದ ಮಂಜುಳಾ ರವರು ಹಾಗೂ ಸಹ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು

Be the first to comment

Leave a Reply

Your email address will not be published.


*