ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಹೈಕಮಾಂಡ್ ಗೆ ವಾಸ್ತವ ವರದಿ – ಜಮೀರ್ ಅಹಮದ್ ಖಾನ್

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಉಸ್ತುವಾರಿ ಆಗಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿ,
ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲಾಗಿದ್ದು ಹೈಕಮಾಂಡ್ ಗೆ ವಾಸ್ತವದ ವರದಿ ನೀಡಲಾಗುವುದು ಎಂದು ತಿಳಿಸಿದರು.

 


ವೀರಪ್ಪ ಮೊಯ್ಲಿ, ಶಿವಶಂಕರ ರೆಡ್ಡಿ, ರಕ್ಷಾ ರಾಮಯ್ಯ, ವೆಂಕಟ ರಮಣಯ್ಯ, ಕೆಂಚೆಗೌಡ ಅವರ ಹೆಸರು ಸಭೆಯಲ್ಲಿ ಪ್ರಸ್ತಾಪ ಆಗಿದೆ. ಹೈಕಮಾಂಡ್ ತೀರ್ಮಾನ ಕ್ಕೆ ಎಲ್ಲರೂ ಬದ್ಧ ಎಂದೂ ಹೇಳಿದ್ದಾರೆ. ಹೀಗಾಗಿ, ನಾವು ತಕ್ಷಣ ವರದಿ ನೀಡಲಿದ್ದೇವೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಜಿಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತಾಲೂಕು, ಜಿಲ್ಲಾ, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರು ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published.


*