ರಾಜ್ಯ ಸರ್ಕಾರದಿಂದ 13 ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ:-ಗಿರಿನಾಡು ಯಾದಗಿರಿ ಜಿಲ್ಲೆಗೂ ಗ್ರೀನ್ ಸಿಗ್ನಲ್

ವರದಿ:ರಾಘವೇಂದ್ರ ಮಾಸ್ತರ ಸುರಪುರ

ಜೀಲ್ಲಾ ಸುದ್ದಿಗಳು

ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆಯಿಲ್ಲ

ಅಂಬಿಗ ನ್ಯೂಸ್ ಸುದ್ದಿ; ಬೆಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೇ 3ರ ವರೆಗೂ ಮಾತ್ರ ಈ ಮಾರ್ಗಸೂಚಿ ಅನ್ವಯವಾಗುವಂತೆ ಲಾಕ್ ಡೌನ್ ನಲ್ಲಿ ಕೆಲ ಸಡಿಲಿಕೆ ಮಾಡಿ ಆದೇಶ ನೀಡಿದೆ.

ಆದರೆ ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಈ ಮಾರ್ಗಸೂಚಿ ಅನ್ವಯವಾಗುವುದಿಲ್ಲ.

ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯದ ಆರ್ಥಿಕ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಧಿಕಾರಿಗಳು ಹಲವು ಸಲಹೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ 13 ಜಿಲ್ಲೆಗಳಿಗೆ ಮೇ 3ರವರೆಗೆ ಅನ್ವವಾಗುವಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಈ ಮಾರ್ಗಸೂಚಿ ಗ್ರೀನ್​​​ ಜೋನ್​​ಗಳಾದ ರಾಯಚೂರು, ಶಿವಮೊಗ್ಗ, ಯಾದಗಿರಿ, ಹಾಸನ, ಕೊಪ್ಪಳ, ಹಾವೇರಿ, ಕೋಲಾರ, ರಾಮನಗರ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಅನ್ವಯವಾಗಲಿವೆ.

ಇಲ್ಲಿ ವ್ಯಾಪಾರ ಮತ್ತು ವಹಿವಾಟಿಗೆ ಅವಕಾಶ ನೀಡಲಾಗಿದೆ. ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್​​ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಜತೆಗೆ ಇವರಿಗೆ ಕೆಲಸ ಮಾಡುವ ಸ್ಥಳದಲ್ಲೇ ವಾಸ್ಯವಕ್ಕೆ ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ವಸತಿ ಸಮುಚ್ಛಯಗಳಲ್ಲಿನ ಕಾಂಪ್ಲೆಕ್ಸ್, ಅಂಗಡಿ ಮತ್ತು ಮಳಿಗೆಗಳನ್ನು ತೆರೆಯಬಹುದು.

ಜನ ಸೇರುವ ಮಾಲ್​​​ ಮತ್ತು ಕಮರ್ಷಿಯಲ್​​ ಬಿಲ್ಡಿಂಗ್​​ಗಳು ತೆರೆಯುವಂತಿಲ್ಲ. ಸಾಮಾಜಿಕ ಅಂತರ ಪಾಲೀಸಬೇಕು. ಇನ್ನು ಬೆಂಗಳೂರು ನಗರ, ಮೈಸೂರು, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್, ಬಾಗಲಕೋಟೆ, ದಕ್ಷಿಣ ಕನ್ನಡ ರೆಡ್ ಝೋನ್ ನಲ್ಲಿರುವ ಈ 8 ಜಿಲ್ಲೆಗಳಿಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯವಾಗುವುದಿಲ್ಲ.

Be the first to comment

Leave a Reply

Your email address will not be published.


*