ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಕೆ

ಮೈಸೂರು ಜಿಲ್ಲಾ ಸಂಘದ ಹಾಸ್ಟೆಲ್ ನಿರ್ಮಾಣ, ಹಾಗೂ ಇತರೆ ಕಟ್ಟಡಗಳ ನಿರ್ಮಾಣಕ್ಕಾಗಿ ಸಂಸದರ ನಿಧಿಯಿಂದ ಅನುದಾನ ಬಿಡುಗಡೆ ಮಾಡಬೇಕೆಂದು ಪ್ರತಾಪ ಸಿಂಹ ನವರಿಗೆ ಮನವಿ

ಉಡುಪಿ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಮಧ್ವರಾಜ್ ಅವರು ಮನೋರಮಾ ಮಧ್ವರಾಜ್ ಅವರ ಆಶೀರ್ವಾದ ಪಡೆದು ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು. ಇದರ ಬಳಿಕ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿ ತೆರಳಿ ಚುನಾವಣಾಧಿಕಾರಿ ಹೆಫ್ಟಿಬಾ ರಾಣಿ ಕೊರ್ಲಪಾಟಿ ಅವರಿಗೆ ತನ್ನ ನಾಮಪತ್ರ ಸಲ್ಲಿಸಿದರು

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಚಿಕ್ಕಮಗಳೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ವಿಜಯ ಕುಮಾರ್ ಅವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*