ಯಾದಗಿರಿ ಬಿಗ್ ಬ್ರೇಕಿಂಗ್ ಹಾಡುಹಗಲೇ ಜಿಲ್ಲಾ ಪಂಚಾಯಿತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ, ಕೊಲೆಗೆ ಯತ್ನ

ವರದಿ:ರಾಘವೇಂದ್ರ ಮಾಸ್ತರ ಸುರಪುರ

ಅಂಬಿಗ ನ್ಯೂಸ್ ಯಾದಗಿರಿ

ದುಷ್ಕರ್ಮಿಗಳು ಹಾಡುಹಗಲೇ ಜಿಪಂ ವಿಪಕ್ಷ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಳಗ್ಗೆ ಯಾದಗಿರಿ ನಗರದ ಎಸ್.ಪಿ. ಕಚೇರಿ ಸಮೀಪ ಚಿತ್ತಾಪುರ ರಸ್ತೆಯಲ್ಲಿ ನಡೆದಿದೆ.

ಸುರಪುರ ತಾಲೂಕಿನ ಕರ್ನಾಳ ಗ್ರಾಮದ ಬಿಜೆಪಿ ಮುಖಂಡ, ಜಿಪಂ ಸದಸ್ಯ ಹಾಗೂ ಶಾಸಕ ರಾಜುಗೌಡ ಅವರ ಆಪ್ತನಾಗಿದ್ದ ಮರಿಲಿಂಗಪ್ಪ ಕರ್ನಾಳ ಎಂಬುವರ ಮೇಲೆಯೇ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಲ್ಲಲು ಯತ್ನಿಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚೀರಾಡುತ್ತಾ ಸಾರ್ವಜನಿಕರಡೆಗೆ ಓಡುತ್ತಿದ್ದಂತೆ ದುಷ್ಕರ್ಮಿಗಳು ಬಿಟ್ಟು ಓಡಿ ಹೋಗಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ನಗರದ ಜನರು ಆತಂಕಗೊಂಡಿದ್ದು, ಹಲ್ಲೆಗೊಳಗಾದ ವ್ಯಕ್ತಿ ರಕ್ತಸಿಕ್ತ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿರುವ ವಿಷಯ ಪೊಲೀಸರಿಗೆ ತಿಳಿದು, ಸ್ಥಳಕ್ಕೆ ಧಾವಿಸಿದ ಪೊಲೀಸರು  ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಕುರಿತು ಯಾದಗಿರಿ ನಗರದ ಪೋಉಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪರಾಧಿಗಳ ಪತ್ತೆಗೆ ಪೋಲಿಸರು ಜಾಲ ಬೀಸಿದ್ದಾರೆ.

Be the first to comment

Leave a Reply

Your email address will not be published.


*