ಅನೈತಿಕ ಸಂಬಂಧ ಆರೋಪ: ಮಾಡಿ ಮೇಲೆ ಮಲಗಿದ್ದ ವ್ಯಕ್ತಿಯ ಬರ್ಬರ ಕೊಲೆ

ವರದಿ:ರಾಘವೇಂದ್ರ ಮಾಸ್ತರ ಸುದ್ದಿ ಸಂಪಾದಕರು

ಅನೈತಿಕ ಸಂಬಂಧ ಹೊಂದಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸುರಪುರದ ದೇವಿಕೆರಾ ಗ್ರಾಮದಲ್ಲಿ ನಡೆದಿದೆ.

ಅಂಬಿಗ ನ್ಯೂಸ್ ಯಾದಗಿರಿ

ಸುರಪುರ (ಯಾದಗಿರಿ): ಅನೈತಿಕ ಸಂಬಂಧ ಹೊಂದಿದ್ದ ಆರೋಪವನ್ನು ಹೊರಿಸಿ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ದೇವಿಕೆರಾ ಗ್ರಾಮದಲ್ಲಿ ನಡೆದಿದೆ.

ಯಂಕಪ್ಪ ತಂದೆ ಭೀಮಣ್ಣ ಬೇವಿನಗಿಡ (35) ಕೊಲೆಯಾದ ವ್ಯಕ್ತಿಯಾಗಿದ್ದು,
ಯಂಕಪ್ಪ ಮಂಗಳವಾರ ರಾತ್ರಿ ಮನೆಯ ಛಾವಣಿ ಮೇಲೆ ಮಲಗಿದ್ದ ಎನ್ನಲಾಗಿದೆ .

ಈ ವೇಳೆ ರಾತ್ರಿ 12 ಗಂಟೆಯ ಸುಮಾರಿಗೆ ಅಲ್ಲಿಗೆ ಆಗಮಿಸಿದ ಶಿವಪ್ಪ, ಆತನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಬಳಿಕ ಠಾಣೆಗೆ ಬಂದು ಶರಣಾಗಿದ್ದಾನೆ.ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Be the first to comment

Leave a Reply

Your email address will not be published.


*